ಅಂದು ಪಾಸ್ಕಹಬ್ಬದ ಹಿಂದಿನ ದಿನ. ತಾವು ಈ ಲೋಕವನ್ನು ಬಿಟ್ಟು ಪಿತನ ಬಳಿಗೆ ಹೋಗಬೇಕಾದ ಗಳಿಗೆ ಬಂದಿರುವುದು ಎಂದು ಯೇಸು ಸ್ವಾಮಿಗೆ ತಿಳಿದಿತ್ತು. ಈ ಲೋಕದಲ್ಲಿದ್ದ ತಮ್ಮವರನ್ನು ಯಾವಾಗಲೂ ಪ್ರೀತಿಸುತ್ತಿದ್ದ ಅವರು ಆ ಪ್ರೀತಿಯ ಪರಮಾವಧಿಯನ್ನು ಈಗ ತೋರಿಸಲಿದ್ದರು.