ಅದಕ್ಕೆ ಮೋಶೆ, “ನಾನು ಈ ಪಟ್ಟಣದಿಂದಾಚೆಗೆ ಹೋದ ಕೂಡಲೆ ಸರ್ವೇಶ್ವರ ಸ್ವಾಮಿಯ ಕಡೆಗೆ ಕೈಯೆತ್ತಿ ಪ್ರಾರ್ಥಿಸುವೆನು. ಆಗ ಗುಡುಗು ಮತ್ತು ಕಲ್ಲಿನ ಮಳೆಯು ನಿಂತುಹೋಗುವುವು. ಇದರಿಂದ ಇಡೀ ಲೋಕವು ಸರ್ವೇಶ್ವರನ ಅಧೀನದಲ್ಲಿದೆ ಎಂದು ತಾವು ತಿಳಿದುಕೊಳ್ಳುವಿರಿ.