ಬಿಳಾಮನು ಹೀಗೆ ಹೋದುದರಿಂದ ದೇವರಿಗೆ ಸಿಟ್ಟಾಯಿತು. ಸರ್ವೇಶ್ವರನ ದೂತನು ಅವನಿಗೆ ಎದುರಾಳಿಯಾಗಿ ದಾರಿಯಲ್ಲಿ ನಿಂತುಕೊಂಡನು. ಬಿಳಾಮನು ತನ್ನ ಕತ್ತೆಯ ಮೇಲೆ ಹತ್ತಿ ಇಬ್ಬರು ಆಳುಗಳ ಸಂಗಡ ಸವಾರಿ ಮಾಡುತ್ತಿದ್ದನು.