“ಆ ಕಾಲದಲ್ಲಿ ನಾನು ಯೆಹೋಶುವನಿಗೆ, ‘ನಿಮ್ಮ ದೇವರಾದ ಸರ್ವೇಶ್ವರ ಆ ಇಬ್ಬರು ಅರಸರಿಗೆ ಮಾಡಿದ್ದನ್ನು ನೀನೇ ನೋಡಿರುವೆ. ನೀನು ನದಿ ದಾಟಿಹೋಗುವ ಎಲ್ಲ ರಾಜ್ಯಗಳನ್ನೂ ಅವರು ಹಾಗೆಯೇ ನಾಶಮಾಡುವರು.