ಅವರು ಬಲಿಭೋಜನಕ್ಕಾಗಿ ಗುಡ್ಡಕ್ಕೆ ಹೋಗುವ ಮೊದಲೇ ನೀವು ಊರೊಳಕ್ಕೆ ಹೋದರೆ ಸಿಕ್ಕುವರು. ಅವರು ಅಲ್ಲಿಗೆ ಹೋಗುವವರೆಗೆ ಜನರು ಊಟಮಾಡುವುದಿಲ್ಲ. ಅವರು ಹೋಗಿ ಬಲಿ ಆಹಾರವನ್ನು ಆಶೀರ್ವದಿಸುತ್ತಾರೆ; ಅನಂತರವೇ ಆಮಂತ್ರಿತರು ಊಟಮಾಡುವುದು. ಈಗಲೇ ಹೋಗಿ; ಅವನು ಸಿಕ್ಕುವ ಸಮಯ ಇದೇ,” ಎಂದರು ಆ ಮಹಿಳೆಯರು.
Go to Home Page