ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ, “ಸುನ್ನತಿಯಿಲ್ಲದ ಈ ಕಾವಲುದಂಡಿನವರೆಗೆ ನೇರವಾಗಿ ಹೋಗೋಣ ಬಾ; ಬಹುಶಃ ಸರ್ವೇಶ್ವರ ತಾವೇ ನಮ್ಮ ಪರವಾಗಿ ಕಾರ್ಯಸಾಧಿಸುವರು. ಬಹುಜನರಿಂದಾಗಲಿ, ಸ್ವಲ್ಪಜನರಿಂದಾಗಲಿ, ರಕ್ಷಿಸುವುದು ಸರ್ವೇಶ್ವರಸ್ವಾಮಿಗೆ ಅಸಾಧ್ಯವಲ್ಲ,” ಎಂದು ಹೇಳಿದನು.