ಚೆರೂಯಳ ಮಗನಾದ ಅಬೀಷೈಯು ದಾವೀದನ ಸಹಾಯಕ್ಕೆ ಬಂದು ಫಿಲಿಷ್ಟಿಯನನ್ನು ಕೊಂದುಹಾಕಿದನು. ಆಗ ಜನರು ದಾವೀದನಿಗೆ, “ಇಸ್ರಯೇಲರ ಆಶಾಜ್ಯೋತಿ ಆರಿಹೋಗದಂತೆ ನೀನು ಇನ್ನು ಮುಂದೆ ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು,” ಎಂದು ಖಂಡಿತವಾಗಿ ಹೇಳಿದರು.