ಈ ಇಬ್ಬರನ್ನೂ ವಧಿಸಿದ ಪಾಪವು ಯೋವಾಬನ ತಲೆಯ ಮೇಲೂ ಅವನ ಸಂತಾನದವರ ತಲೆಯ ಮೇಲೂ ಇರಲಿ; ಆದರೆ ದಾವೀದನಿಗೂ ಅವನ ಸಿಂಹಾಸನವನ್ನೇರುವ ಸಂತಾನದವರಿಗೂ ಸರ್ವೇಶ್ವರನಿಂದ ನಿತ್ಯಸೌಭಾಗ್ಯ ದೊರಕಲಿ!” ಎಂದನು.