ಸಿರಿಯಾದವರ ಸೈನಿಕನೊಬ್ಬನು ಯಾರಿಗೂ ಗುರಿಯಿಡದೆ ಬಾಣವನ್ನೆಸೆದನು. ಆ ಬಾಣ ಇಸ್ರಯೇಲರ ಅರಸನಿಗೆ, ಅವನ ಕವಚದ ಸಂದಿನಲ್ಲಿ ಬಂದು ತಾಕಿತು. ಆಗ ಅವನು ತನ್ನ ಸಾರಥಿಗೆ, “ರಥವನ್ನು ತಿರುಗಿಸಿ ನನ್ನನ್ನು ರಣರಂಗದಿಂದ ಆಚೆಗೆ ತೆಗೆದುಕೊಂಡು ಹೋಗು; ನನಗೆ ದೊಡ್ಡ ಗಾಯವಾಗಿದೆ,” ಎಂದು ಹೇಳಿದನು.