ಸರ್ವೇಶ್ವರ ಹೀಗೆನ್ನುತ್ತಾರೆ : “ಹೌದು, ಅಪಹರಿಸಲಾಗುವುದು ಬಲಾಢ್ಯನ ಸೆರೆಯಾಳುಗಳನು ಕಸಿದುಕೊಳ್ಳಲಾಗುವುದು ಭೀಕರನ ಕೊಳ್ಳೆಯನು. ನಿನ್ನೊಡನೆ ಹೋರಾಡುವವನ ಸಂಗಡ ಹೊರಾಡುವೆ ನಾನೇ. ಅಷ್ಟೇ ಅಲ್ಲ, ನಿನ್ನ ಮಕ್ಕಳನು ಉದ್ಧರಿಸುವೆ ನಾನೇ.