ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಎಲೈ ಇಸ್ರಯೇಲ್, ನಾನು ಎಷ್ಟೋ ಆದರದಿಂದ ನಿನ್ನನ್ನು ನನ್ನ ಪುತ್ರನೆಂದು ಭಾವಿಸಿ, ನಿನಗೆ ಮನೋಹರವಾದ ನಾಡನ್ನು, ಅಂದರೆ, ಸಮಸ್ತ ರಾಷ್ಟ್ರಗಳಲ್ಲಿ ರಮಣೀಯವಾದ ಸೊತ್ತನ್ನು ಕೊಡಬೇಕು ಎಂದುಕೊಂಡಿದ್ದೆ. ನೀನು ನನ್ನನ್ನು ‘ತಂದೆ’ ಎಂದು ಸನ್ಮಾನಿಸಿ, ನನ್ನನ್ನು ತಪ್ಪದೆ ಹಿಂಬಾಲಿಸಿ ಬರುವೆಯೆಂದಿದ್ದೆ.
Go to Home Page