ಜನರು : “ನಾವು ಸುಮ್ಮನೆ ಕುಳಿತಿರುವುದೇಕೆ? ಕೂಡಿಬನ್ನಿ, ಕೋಟೆಕೊತ್ತಲುಗಳುಳ್ಳ ಊರುಗಳನ್ನು ಸೇರಿಕೊಳ್ಳೋಣ. ಅಲ್ಲೆ ನಾಶವಾಗೋಣ. ನಮ್ಮ ದೇವರಾದ ಸರ್ವೇಶ್ವರನಿಗೆ ನಾವು ಪಾಪಮಾಡಿದ್ದರಿಂದ ಅವರು ನಮ್ಮನ್ನು ನಾಶಕ್ಕೆ ಗುರಿಮಾಡಿದ್ದಾರೆ. ವಿಷಬೆರೆತ ನೀರನ್ನು ಕುಡಿಯಲು ಕೊಟ್ಟಿದ್ದಾರೆ.