ಇದನ್ನು ಕೇಳಿದ ಅರಸನು ಸುಡಾನಿನ ಎಬೆದ್ಮೆಲೆಕನಿಗೆ, “ನೀನು ಇಲ್ಲಿಂದ ಮೂವತ್ತು ಮಂದಿ ಆಳುಗಳನ್ನು ಕರೆದುಕೊಂಡು ಹೋಗಿ ಪ್ರವಾದಿ ಯೆರೆಮೀಯನು ಸಾಯುವ ಮೊದಲೇ, ಅವನನ್ನು ಬಾವಿಯಿಂದ ಎತ್ತಿಸು,” ಎಂದು ಅಪ್ಪಣೆಕೊಟ್ಟನು.