ಅದಕ್ಕೆ ಆ ಗೃಹನಿರ್ವಾಹಕ, “ಸಮಾಧಾನದಿಂದಿರಿ, ಹೆದರಬೇಡಿ. ನಿಮ್ಮ ತಂದೆಗೂ ನಿಮಗೂ ದೇವರಾದವರು ನಿಮ್ಮ ಚೀಲಗಳಲ್ಲಿಯೇ ನಿಧಿ ನಿಕ್ಷೇಪ ದೊರಕುವಂತೆ ಅನುಗ್ರಹಿಸಿದ್ದಾರೆ; ನೀವು ಕೊಟ್ಟ ಹಣ ನನಗೆ ಮುಟ್ಟಿದೆ,” ಎಂದು ಹೇಳಿ ಸಿಮೆಯೋನನನ್ನು ಅವರ ಬಳಿಗೆ ಕರೆದುಕೊಂಡು ಬಂದನು.