ಮೋಶೆ ಆಜ್ಞಾಶಾಸನಗಳಾದ ಆ ಎರಡು ಕಲ್ಲಿನ ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಸೀನಾಯಿ ಬೆಟ್ಟದಿಂದ ಇಳಿದು ಬಂದಾಗ ಅವನ ಮುಖ ಪ್ರಕಾಶಮಾನವಾಗಿತ್ತು. ಏಕೆಂದರೆ ಅವನು ಸರ್ವೇಶ್ವರನ ಸಂಗಡ ಸಂಭಾಷಿಸಿದ್ದನು. ಆದರೆ ಅದು ಅವನಿಗೆ ತಿಳಿದಿರಲಿಲ್ಲ.