ಅಂಥವರು ಪರಿಹಾರಕ್ಕಾಗಿ ಹಿಂಡಿನಿಂದ ಕಳಂಕರಹಿತವಾದ ಟಗರೊಂದನ್ನು ಅಥವಾ ಅದಕ್ಕೆ ಸರಿಸಮಾನವಾದುದನ್ನು ಯಾಜಕನ ಬಳಿಗೆ ತೆಗೆದುಕೊಂಡು ಬರಬೇಕು. ಅವರು ತಿಳಿಯದೆ ಮಾಡಿದ ತಪ್ಪನ್ನು ಪರಿಹರಿಸುವುದಕ್ಕಾಗಿ ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಬೇಕು. ಆಗ ಅವರಿಗೆ ಕ್ಷಮೆ ದೊರಕುವುದು.