ಇಸ್ರಯೇಲರು ಯೆಹೋಶುವನು ಆಜ್ಞಾಪಿಸಿದಂತೆಯೇ ಮಾಡಿದರು. ಸರ್ವೇಶ್ವರಸ್ವಾಮಿ ಯೆಹೋಶುವನಿಗೆ ಹೇಳಿದ ಪ್ರಕಾರ ಅವರು ಇಸ್ರಯೇಲರ ಸಂಖ್ಯೆಗೆ ಅನುಸಾರವಾಗಿ ಜೋರ್ಡನಿನ ಮಧ್ಯದಿಂದ ಹನ್ನೆರಡು ಕಲ್ಲುಗಳನ್ನು ಎತ್ತಿ ತಮ್ಮ ಬಿಡಾರದ ಸ್ಥಳಕ್ಕೆ ತಂದು ಅಲ್ಲಿ ಅವುಗಳನ್ನು ನಿಲ್ಲಿಸಿದರು.