ಅವರು ಯೆಹೋಶುವನಿಗೆ, “ನಿಮ್ಮ ದೇವರಾದ ಸರ್ವೇಶ್ವರ ತಮ್ಮ ದಾಸ ಮೋಶೆಗೆ, ‘ನಾನು ನಿಮಗೆ ಈ ದೇಶವನ್ನೆಲ್ಲ ಕೊಡುವಾಗ ನೀವು ಇದರ ನಿವಾಸಿಗಳನ್ನೆಲ್ಲಾ ಸಂಹರಿಸಬೇಕು’ ಎಂದು ಆಜ್ಞಾಪಿಸಿದ್ದಾರೆಂದು ಕೇಳಿ ನಮ್ಮ ಪ್ರಾಣ ತೆಗೆಯುವಿರೆಂದು ಹೆದರಿ ಹೀಗೆ ಮಾಡಿದೆವು.