ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ತುಂಡುತುಂಡು ಮಾಡಿ, ಆ ತುಂಡುಗಳನ್ನು ದೂತರ ಮುಖಾಂತರ ಇಸ್ರಯೇಲರ ಎಲ್ಲ ಪ್ರಾಂತ್ಯಗಳಿಗೆ ಕಳುಹಿಸಿದನು. “ಯಾರು ಸೌಲ ಹಾಗು ಸಮುವೇಲರನ್ನು ಹಿಂಬಾಲಿಸುವುದಿಲ್ಲವೋ ಅವರ ಎತ್ತುಗಳನ್ನು ಹೀಗೆಯೇ ಕಡಿಯಲಾಗುವುದು,” ಎಂದು ಹೇಳಿಸಿದನು. ಸರ್ವೇಶ್ವರನ ಭಯಭಕ್ತಿಯಿಂದ ಪ್ರೇರಿತರಾದ ಜನರೆಲ್ಲರೂ ಏಕಮನಸ್ಸಿನಿಂದ ಕೂಡಿಬಂದರು.
Go to Home Page