ಜನರು ಅವನಿಗೆ, “ದೇವರ ಸಹಾಯದಿಂದ ಈ ದಿನ ಇಸ್ರಯೇಲರಿಗೆ ಮಹಾಜಯವನ್ನುಂಟುಮಾಡಿದ ಯೋನಾತಾನನು ಸಾಯಬೇಕೇ? ಕೂಡದು; ಸರ್ವೇಶ್ವರನಾಣೆ. ಅವನ ತಲೆಗೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಿಸಬಾರದು,” ಎಂದು ಹೇಳಿ ಪ್ರಾಯಶ್ಚಿತ್ತವನ್ನು ಕೊಟ್ಟು ಅವನನ್ನು ಬಿಡಿಸಿದರು.