ಅಲ್ಲಿ ಸರ್ವೇಶ್ವರನಿಗೆ ಬಲಿಪೀಠವನ್ನು ಕಟ್ಟಿಸಿ ಅದರ ಮೇಲೆ ಅವರಿಗೆ ದಹನಬಲಿಗಳನ್ನು ಹಾಗು ಶಾಂತಿಸಮಾಧಾನದ ಬಲಿಗಳನ್ನು ಅರ್ಪಿಸಿದನು. ಹೀಗೆ ನಾಡಿನ ಮೇಲಿದ್ದ ಸರ್ವೇಶ್ವರನ ಕೋಪ ಶಮನವಾಯಿತು. ಇಸ್ರಯೇಲರಲ್ಲಿದ್ದ ಆ ಸಂಹಾರಕವ್ಯಾಧಿ ನಿಂತುಹೋಯಿತು.