ದಾವೀದನು ಕಣ್ಣೆತ್ತಿ ನೋಡಿ ಸರ್ವೇಶ್ವರನ ದೂತನು ಭೂಮ್ಯಾಕಾಶಗಳ ನಡುವೆ ನಿಂತಿರುವುದನ್ನೂ ಚಾಚಿದ ಕೈಯಲ್ಲಿ ಜೆರುಸಲೇಮಿಗೆ ವಿರೋಧವಾಗಿ ಹಿರಿದ ಕತ್ತಿ ಇರುವುದನ್ನೂ ಕಂಡನು. ಆಗ ಅವನೂ ಹಿರಿಯರೂ ಗೋಣಿತಟ್ಟನ್ನು ಉಟ್ಟುಕೊಂಡು ಬೋರಲಾಗಿ ಬಿದ್ದರು.