ಆಮೇಲೆ ಅವನೂ ಅವನ ಮಕ್ಕಳೂ ರಾಜಪುತ್ರನನ್ನು ಹೊರಗೆ ಕರೆದುಕೊಂಡು ಬಂದು ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ಧರ್ಮಶಾಸ್ತ್ರವನ್ನು ಕೊಟ್ಟು, ಅವನಿಗೆ ರಾಜಾಭಿಷೇಕ ಮಾಡಿದರು. ಕೂಡಲೆ ಜನರು, “ಅರಸನು ಚಿರಂಜೀವಿಯಾಗಿರಲಿ!” ಎಂದು ಹರಸಿದರು.