ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಇಸ್ರಯೇಲಿನ ಜನರೇ, ನೀವು ಹಿಂದಿರುಗುವಿರಾದರೆ ನನ್ನ ಬಳಿಗೆ ಬನ್ನಿ. ಅಸಹ್ಯವಾದ ನಿಮ್ಮ ಮೂರ್ತಿ ಪೂಜಾವಸ್ತುಗಳನ್ನು ನನ್ನ ಕಣ್ಣೆದುರಿನಿಂದ ತೆಗೆದುಬಿಡಿ. ಆಗ ನೀವು ಅತ್ತಿತ್ತ ತೂರಾಡಲಾರಿರಿ.