ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಯಂತೆ ಇದ್ದೆ. “ಮರವನ್ನು ಫಲಸಹಿತ ನಾಶಪಡಿಸೋಣ, ಜೀವಲೋಕದಿಂದ ಇವನನ್ನು ನಿರ್ಮೂಲಮಾಡೋಣ. ಅವನ ಹೆಸರೇ ಇಲ್ಲದಂತಾಗಲಿ,” ಎಂದು ಅವರು ಕುಯುಕ್ತಿ ಕಲ್ಪಿಸಿದ್ದರು. ಆದರೆ ನನಗೆ ಅದು ತಿಳಿದಿರಲಿಲ್ಲ.