‘ದಾವೀದ ಮನೆತನದವರೇ, ಸರ್ವೇಶ್ವರನ ಮಾತಿದು: ಮುಂಜಾನೆಯೆ ನ್ಯಾಯನೀತಿಯನ್ನು ಪರಿಪಾಲಿಸಿರಿ; ವಂಚಿತರನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ. ಇಲ್ಲವಾದರೆ ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ಕೋಪಾಗ್ನಿಯು ಜ್ವಾಲೆಯಂತೆ ಭುಗಿಲೇಳುವುದು, ಅದರ ಕಿಚ್ಚನ್ನು ಮುಚ್ಚಿಡಲು ಯಾರಿಂದಲೂ ಆಗದು.