ಇವರಿಗೆ ಒದಗಿದ ಗತಿಯನ್ನು ನೆನೆದು, ಬಾಬಿಲೋನಿಯದಲ್ಲಿ ಸೆರೆಯಾಗಿರುವ ಯೆಹೂದ್ಯರೆಲ್ಲರು ಯಾರನ್ನಾದರು ಶಪಿಸುವಾಗ, ‘ಬಾಬಿಲೋನಿಯದ ಅರಸ ಬೆಂಕಿಯಲ್ಲಿ ಸುಟ್ಟು ಭಸ್ಮಮಾಡಿದ ಚಿದ್ಕೀಯನ ಹಾಗು ಅಹಾಬನ ಗತಿಯನ್ನೆ ಸರ್ವೇಶ್ವರ ನಿನಗೂ ತರಲಿ’ ಎಂದು ಶಾಪಹಾಕುವರು.