ಆ ವನಕ್ಕೆ ಹೀಗೆ ಪ್ರವಾದಿಸು: ‘ಸರ್ವೇಶ್ವರನ ಮಾತನ್ನು ಕೇಳು: ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಆಹಾ, ನಾನು ನಿನ್ನೊಳಗೆ ಬೆಂಕಿಯನ್ನು ಹೊತ್ತಿಸುವೆನು. ಅದು ನಿನ್ನಲ್ಲಿನ ಎಲ್ಲಾ ಹಸಿರುಮರಗಳನ್ನೂ ಒಣಮರಗಳನ್ನೂ ಕಬಳಿಸಿಬಿಡುವುದು; ಧಗಧಗಿಸುವ ಜ್ವಾಲೆ ಆರದೆ, ತೆಂಕಲಿಂದ ಬಡಗಲವರೆಗೆ ಎಲ್ಲರ ಮುಖಗಳನ್ನು ಕುಂದಿಸುವುದು.
Go to Home Page