ಏಳು ದಿನಗಳ ಕಾರ್ಯವನ್ನು ಮುಗಿಸಿದ ಬಳಿಕ, ಎಂಟನೆಯ ದಿನದಲ್ಲಿಯೂ ಮುಂದೆಯೂ ಯಾಜಕರು ಬಲಿಪೀಠದ ಮೇಲೆ ನಿಮ್ಮ ಪರವಾಗಿ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಅರ್ಪಿಸಬೇಕು; ಆಗ ನಾನು ನಿಮಗೆ ಪ್ರಸನ್ನನಾಗುವೆನು; ಇದು ಸರ್ವೇಶ್ವರನಾದ ದೇವರ ನುಡಿ.”