ಯೇಸುಸ್ವಾಮಿ ಹೀಗೆ ಬೋಧಿಸುತ್ತಿರುವಾಗಲೇ ಯೆಹೂದ್ಯ ಅಧಿಕಾರಿಯೊಬ್ಬನು ಅಲ್ಲಿಗೆ ಬಂದನು. ಅವನು ಯೇಸುವಿನ ಮುಂದೆ ಮೊಣಕಾಲೂರಿ, “ನನ್ನ ಮಗಳು ಈಗ ತಾನೆ ಸತ್ತುಹೋದಳು. ಆದರೂ ತಾವು ದಯಮಾಡಿಸಿ ತಮ್ಮ ಹಸ್ತವನ್ನು ಆಕೆಯ ಮೇಲಿಡಬೇಕು. ಅವಳು ಮರಳಿ ಬದುಕುವಳು,” ಎಂದು ಬೇಡಿಕೊಂಡನು.