ಪಿಲಾತನು ತನ್ನ ಪ್ರಯತ್ನದಿಂದ ಏನೂ ಫಲಿಸುತ್ತಿಲ್ಲವೆಂದೂ ಅದಕ್ಕೆ ಬದಲಾಗಿ ದಂಗೆ ಏಳುವ ಸೂಚನೆಯಿದೆಯೆಂದೂ ಮನಗಂಡನು. ಆದುದರಿಂದ ನೀರನ್ನು ತರಿಸಿ, “ಈ ನಿರಪರಾಧಿಯ ರಕ್ತಪಾತಕ್ಕೆ ಹೊಣೆ ನಾನಲ್ಲ; ಅದಕ್ಕೆ ನೀವೇ ಹೊಣೆಗಾರರು,” ಎಂದು ಹೇಳಿ ಜನರೆದುರಿಗೆ ಕೈ ತೊಳೆದುಕೊಂಡನು.