ಇತ್ತ ಯೇಸು, ರೋಗವನ್ನು ಗುಣಪಡಿಸುವ ಶಕ್ತಿ ತಮ್ಮಿಂದ ಹೊರಹೊಮ್ಮಿದ್ದನ್ನು ತಕ್ಷಣ ತಿಳಿದು, ಸುತ್ತಲಿದ್ದ ಜನರತ್ತ ತಮ್ಮ ದೃಷ್ಟಿಯನ್ನು ಹರಿಸಿ, “ನನ್ನ ಉಡುಪನ್ನು ಮುಟ್ಟಿದವರಾರು?” ಎಂದು ಪ್ರಶ್ನಿಸಿದರು.