ಅದು ಯಾವುದೆಂದರೆ ನಾನು ಆಡಿದ ಮಾತೇ. ಅಂತಿಮ ದಿನದಂದು ಅದೇ ಅವನಿಗೆ ತೀರ್ಪುಕೊಡುವುದು. ಏಕೆಂದರೆ, ನನ್ನಷ್ಟಕ್ಕೆ ನಾನೇ ಇದನ್ನೆಲ್ಲಾ ಮಾತನಾಡುತ್ತಿಲ್ಲ. ನನ್ನನ್ನು ಕಳುಹಿಸಿದ ಪಿತನೇ, ನಾನು ಏನು ಹೇಳಬೇಕು, ಯಾವ ಮಾತನ್ನು ಆಡಬೇಕು ಎಂದು ನನಗೆ ಆಜ್ಞೆಮಾಡಿದ್ದಾರೆ.