ಆ ದಿನಗಳು ಬಂದಮೇಲೆ ಇಸ್ರಯೇಲ್ ವಂಶದವರೊಡನೆ ನಾನು ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು, ಎಂದರು ಸರ್ವೇಶ್ವರ. ನಾಟಿಸುವೆನು ನನ್ನಾಜ್ಞೆಗಳನು ಅವರ ಮನದಲಿ ಬರೆಯುವೆನು ಅವುಗಳನು ಅವರ ಹೃದಯದಲಿ ದೇವನಾಗಿರುವೆನು ನಾನವರಿಗೆ ಅವರಾಗುವರು ಪ್ರಜೆಗಳು ನನಗೆ.