ಇಂಥ ಗರ್ಭಗುಡಿಯನ್ನು ಅವರು ಒಮ್ಮೆಗೇ ಶಾಶ್ವತವಾಗಿ ಪ್ರವೇಶಿಸಿದ್ದಾರೆ. ಹೋತಗಳ ಅಥವಾ ಹೋರಿಕರುಗಳ ರಕ್ತವನ್ನು ತೆಗೆದುಕೊಂಡು ಅವರು ಪ್ರವೇಶಿಸಲಿಲ್ಲ. ತಮ್ಮ ಸ್ವಂತ ರಕ್ತವನ್ನೇ ತೆಗೆದುಕೊಂಡು ಪ್ರವೇಶಿಸಿ ನಮಗೆ ಶಾಶ್ವತ ಜೀವೋದ್ಧಾರವು ದೊರಕುವಂತೆ ಮಾಡಿದ್ದಾರೆ.