ಇದರಿಂದಾಗಿ ಘಟಸರ್ಪಕ್ಕೆ ಆ ಮಹಿಳೆಯ ಮೇಲೆ ತೀವ್ರತರ ರೋಷವುಂಟಾಯಿತು. ಆಕೆಯ ಇನ್ನುಳಿದ ಸಂತತಿಯವರ ಮೇಲೆ, ಅಂದರೆ ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವವರ ಮೇಲೆ ಹಾಗೂ ಯೇಸುಸ್ವಾಮಿಯ ಪರವಾಗಿ ಸಾಕ್ಷಿನೀಡುವವರ ಮೇಲೆ, ಯುದ್ಧಮಾಡಲು ಹೊರಟುಹೋಯಿತು.