“ಅದೇ ಏಳನೆಯ ತಿಂಗಳಿನ ಹತ್ತನೆಯ ದಿನವನ್ನು ಸರ್ವದೋಷಪರಿಹಾರ ದಿನವನ್ನಾಗಿ ಆಚರಿಸಬೇಕು. ಅಂದು ದೇವಾರಾಧನೆಗಾಗಿ ಸಭೆಕೂಡಬೇಕು. ಪೂರ್ಣವಾಗಿ ಉಪವಾಸ ಮಾಡಬೇಕು. ಸರ್ವೇಶ್ವರನ ಸನ್ನಿಧಿಯಲ್ಲಿ ದಹನ ಬಲಿದಾನ ಮಾಡಬೇಕು.