ಏಹೂದನು ಅವರಿಗೆ ನಾಯಕನಾಗಿ, “ನನ್ನನ್ನು ಹಿಂಬಾಲಿಸಿ ಬನ್ನಿ; ಸರ್ವೇಶ್ವರ ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಗೊಪ್ಪಿಸಿದ್ದಾರೆ,” ಎಂದನು. ಅಂತೆಯೇ ಅವರು ಅವನನ್ನು ಹಿಂಬಾಲಿಸಿ ಮೋವಾಬಿಗೆ ಹೋಗುವ ಹಾಯಗಡಗಳನ್ನೆಲ್ಲ ಹಿಡಿದುಕೊಂಡು ಯಾರನ್ನೂ ದಾಟಗೊಡಲಿಲ್ಲ.